Posts

Showing posts from October, 2023

ನಿಸ್ವನ - ಎಲ್ಲ ಮಲಗಿರುವಾಗ

Image
ನಿಸ್ವನದ ಭಾಗವಾಗಿ... ಕವನ:  ಕೆ ಎಸ್ ನರಸಿಂಹಸ್ವಾಮಿ ಕವನದ ಕಾಪೀರೈಟ್ ಕೃಪೆ:  ಕೆ ಎಸ್ ನರಸಿಂಹಸ್ವಾಮಿ ಪ್ರತಿಷ್ಥಾನ (ಡಾ|| ಮೇಖಲಾ ವೆಂಕಟೇಶ್,  ವ್ಯವಸ್ಥಾಪಕ ಟ್ರಸ್ಟಿ) ರಾಗಸಂಯೋಜನೆ/ಗಾಯನ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ:  ಹೇಮಂತ್ ಕುಮಾರ್ ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಬಾನ್ಸುರೀ/ಕೊಳಲು:  ರಘುನಂದನ್ ರಾಮಕೃಷ್ಣ ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಕೆ ಎಸ್ ನರಸಿಂಹಸ್ವಾಮಿ ಗಳ "ಎಲ್ಲ ಮಲಗಿರುವಾಗ" ಎಂಬ ಈ ಕವನ, ಅವರ "ನವಿಲ ದನಿ" ಸಂಕಲನದಲ್ಲಿದೆ. ಈ ಹಾಡಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಮೋಹನ , ಹಂಸಧ್ವನಿ , ಸುರನಂದಿನಿ , ತುಸುವಾಗಿ  ಯಮನ್ ಕಲ್ಯಾಣಿ , ಮೋಹನ ಕಲ್ಯಾಣಿ  ರಾಗಗಳು ಹಾಸುಹೊಕ್ಕಾಗಿವೆ. ಇಡೀ ಕವನ ಹೀಗಿದೆ. ಎಲ್ಲ ಮಲಗಿರುವಾಗ ೧ ಎಲ್ಲ ಮಲಗಿರುವಾಗ ಎಚ್ಚರಾಯಿತು ನನಗೆ, ಕಣ್ತುಂಬ ಹೊಂಗನಸು ಬೆಳಗಿನಲ್ಲಿ; ಎಲೆ ಮರೆಯ ಹಕ್ಕಿ ಹಾಡಿತ್ತು, ಹನಿಗಳು ಬಿದ್ದು ಹೂವ ಹೊಳೆ ಹರಿದಿತ್ತು ಕಾಡಿನಲ್ಲಿ. ೨ ಬೆಳಗಾಗ ಬಿರಿದ ಮೊಗ್ಗುಗಳು ಸಂಜೆಗೆ ಬಾಡಿ ಸತ್ತ ಹೂಗಳ ರಾಶಿ ಲತೆಯ ಕೆಳಗೆ; ತೆರೆದ ಪುಸ್ತಕದಂತೆ ಬದುಕು, ಮಳೆಬಿಲ್ಲಿನಲಿ ನಾ ಕಂಡೆ ಹರುಷವನು ಮುಗಿಲ ಕೆಳಗೆ. ೩ ಕೇಂದ್ರಬಿಂದುವಿಗೆ ಹತ್ತಿರವೊ ದೂರವೊ ಕಾಣೆ, ಬೀಸುತ್