Posts

Showing posts from December, 2023

ನಿಸ್ವನ - ಗಿರಿಶಿಖರ

Image
ನಿಸ್ವನದ ಭಾಗವಾಗಿ... ಕವನ:  ಅಂಬಿಕಾತನಯದತ್ತ ಕವನದ ಕಾಪೀರೈಟ್:  ಪುನರ್ವಸು ಬೇಂದ್ರೆ ರಾಗಸಂಯೋಜನೆ/ಗಾಯನ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ:  ಹೇಮಂತ್ ಕುಮಾರ್ ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಬಾನ್ಸುರೀ/ಕೊಳಲು:  ರಘುನಂದನ್ ರಾಮಕೃಷ್ಣ ಸಿತಾರ್:  ಅರ್ಜುನ್ ಆನಂದ್   ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಅಂಬಿಕಾತನಯದತ್ತ ರ " ಗಿರಿಶಿಖರ " ಎಂಬ ಈ ಕವನ, ಅವರ " ಹೃದಯ ಸಮುದ್ರ " ಸಂಕಲನದಲ್ಲಿದೆ. ಈ ಹಾಡಿನಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ಕೆಲವು ರಾಗಗಳನ್ನು ಬೇರೆ ಬೇರೆ ಶ್ರುತಿಗಳಲ್ಲಿ ಪೋಣಿಸಲಾಗಿದೆ. ಷಡ್ಜಶ್ರುತಿಯಲ್ಲಿ ಬಿಲಾಸ್‍ಖಾನೀ ತೋಡೀ  (notes from the  Phrygian mode in B ), ತುಸುವಾಗಿ ಭೈರವೀ ಕೂಡ (ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಸಿಂಧುಭೈರವಿ ), ಗಾಂಧಾರಶ್ರುತಿಯಲ್ಲಿ ರಾಗೇಶ್ರೀ  (notes from the Mixolydian mode in D ) ಹಾಗೂ ದೈವತಶ್ರುತಿಯಲ್ಲಿ ಮಾಂಡ್  ರಾಗಗಳಿಗೆ (roughly, notes from G major scale ) ಹಿತವಾದ ಗಿಟಾರ್, ಬಾನ್ಸುರೀಗಳ ಹಿನ್ನೆಲೆಯಿದೆ. ಹೆಚ್ಚಿನ ವಿವರಗಳನ್ನು video ವಿವರಣೆಯಲ್ಲಿರುವ timestamp, chapterಗಳಲ್ಲಿ ನೋಡಬಹುದು. ಇಡೀ ಕವನ ಹೀಗಿದೆ. ಗಿರಿಶಿಖರ ೧ ಅಗೊ ಭೂಮಿಹೃ

ನಿಸ್ವನ - ಕನಸುಗಳ ಮುಗಿಲೇರಿ

Image
ನಿಸ್ವನದ ಭಾಗವಾಗಿ... ಕವನ:  ಪಿ ಕೆ ಪರಮೇಶ್ವರ ಭಟ್ ಕವನದ ಕಾಪೀರೈಟ್:  ಮೂಕಾಂಬಿಕಾ ಎಸ್ ಜಿ ರಾಗಸಂಯೋಜನೆ/ಗಾಯನ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ/ವಯೊಲಿನ್:  ಹೇಮಂತ್ ಕುಮಾರ್ ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ಬಾನ್ಸುರೀ/ಕೊಳಲು:  ರಘುನಂದನ್ ರಾಮಕೃಷ್ಣ ಸಿತಾರ್:  ಅರ್ಜುನ್ ಆನಂದ್ ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಪಿ ಕೆ ಪರಮೇಶ್ವರ ಭಟ್ಟರ ಈ ಕವನದ ರಾಗಸಂಯೋಜನೆಯಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ದೇಶ್ ರಾಗವನ್ನು ಸಿತಾರ್, ಬಾನ್ಸುರೀ, ವಯೊಲಿನ್ ಹಾಗೂ ಶಾಸ್ತ್ರೀಯ ಲಯಗಾರಿಕೆಯೊಂದಿಗೆ ಕಾಣಬಹುದು. ಇಡೀ ಕವನ ಹೀಗಿದೆ. ಕನಸುಗಳ ಮುಗಿಲೇರಿ ೧ ಕನಸುಗಳ ಮುಗಿಲೇರಿ, ಸಂಚರಿಸಿ ಬಾನಗಲ, ಸವಿಬುತ್ತಿ ಮೆಲ್ಲುವೆಳೆವಕ್ಕಿಗಳಿರಾ, ಕಟ್ಟಿ ಕೆಡವಿದ ರುಚಿರಗೋಪುರಗಳೆನಿತಿಹವೊ, ಮತ್ತೆ ಕಟ್ಟುವ ತವಕವೆನಿತು ಮಧುರ! ೨ ನಿಮ್ಮ ಕಾಣ್ಕೆಗಳೆಲ್ಲ ಸ್ವಚ್ಛಂದಗತಿವಡೆದು ಪೆರರೇರದೆತ್ತರಕೆ ಏರಿ ನಿಲಲಿ. ಕನಸು ತಾ ಸಾಕಾರವಾಗಿ ಭುವನಾಕಾರ ಪಡೆದು ತಮ್ಮನು ತಾವೆ ಕಟ್ಟಿಕೊಳಲಿ ೩ ಸ್ವಪ್ನಲೋಕದ ಕನಕಪಕ್ಷಿಸಂಪುಟದಿಂದ ಮೆಲ್ಲುಲಿಯ ಸವಿಗಾನ ಹೊಮ್ಮಿ ಬರಲಿ. ಪಕ್ಷವಿಕ್ಷೇಪದಲಿ ವಿಶ್ವಚೇತನವಿರಲಿ ಸತ್ವಯುತ ಸವಿಬಾಳ ತವಕವಿರಲಿ. - ಪಿ ಕೆ ಪರಮೇಶ್ವರ ಭಟ್ ಈ ಹಾಡುಗಳೆಲ್ಲವೂ  Creative Commons A

ನಿಸ್ವನ - ಇದು ಬಾಳು

Image
ನಿಸ್ವನದ ಭಾಗವಾಗಿ... ಕವನ:  ಎಂ ಗೋಪಾಲಕೃಷ್ಣ ಅಡಿಗ ಕವನದ ಕಾಪೀರೈಟ್ ಕೃಪೆ:  ಎಂ ಗೋಪಾಲಕೃಷ್ಣ ಅಡಿಗ ಮೆಮೋರಿಯಲ್ ಟ್ರಸ್ಟ್, ಬೆಂಗಳೂರು ರಾಗಸಂಯೋಜನೆ/ಗಾಯನ/ವೀಣೆ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ/ವಯೊಲಿನ್/ಚೆಲ್ಲೋ:  ಹೇಮಂತ್ ಕುಮಾರ್ ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಬಾನ್ಸುರೀ/ಕೊಳಲು:  ರಘುನಂದನ್ ರಾಮಕೃಷ್ಣ ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಗೋಪಾಲಕೃಷ್ಣ ಅಡಿಗ ರ " ಇದು ಬಾಳು! " ಎಂಬ ಈ ಕವನ, ಅವರ " ಭಾವತರಂಗ " ಸಂಕಲನದಲ್ಲಿದೆ. ವಯೊಲಿನ್, ಚೆಲ್ಲೋ  ಹಾಗೂ Jazz-ಶೈಲಿಯಿಂದ ಪ್ರೇರಿತವಾದ ಗಿಟಾರ್ ಹಾಗೂ ವೀಣೆಗಳಿಂದ ತುಂಬಿಕೊಂಡಿರುವ ಈ ಹಾಡಿನಲ್ಲಿ, ಷಡ್ಜಶ್ರುತಿಯಲ್ಲಿ ಪಾಶ್ಚಾತ್ಯ ಶಾಸ್ತ್ರೀಯ ಸಂಗೀತದ B natural minor scale (ಕರ್ನಾಟಕ ಶಾಸ್ತ್ರೀಯ ಸಂಗೀತದ ನಠಭೈರವಿ ರಾಗದ ಸ್ವರಗಳು), ಗಾಂಧಾರಶ್ರುತಿಯಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ಛಾಯಾನಟ್  (B minorಇನ relative major scale , D major scaleಇನ ಸ್ವರಗಳು) ಹಾಗೂ ನಿಷಾದಶ್ರುತಿಯಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ರಾಗೇಶ್ರೀ ( mixolydian mode  in A ) ರಾಗಗಳನ್ನು ಪೋಣಿಸಿರುವುದನ್ನು ಕಾಣಬಹುದು. ಹೆಚ್ಚಿನ ವಿವರಗಳನ್ನು video ವಿವರಣೆಯಲ್ಲಿರುವ

ನಿಸ್ವನ - ನಾನಲೆಯುತಿದ್ದೆ

Image
ನಿಸ್ವನದ ಭಾಗವಾಗಿ... ಕವನ:  ಅಂಬಿಕಾತನಯದತ್ತ ಕವನದ ಕಾಪೀರೈಟ್ ಕೃಪೆ:  ಪುನರ್ವಸು ಬೇಂದ್ರೆ ರಾಗಸಂಯೋಜನೆ/ಗಾಯನ/ವೀಣೆ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ:  ಹೇಮಂತ್ ಕುಮಾರ್ ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ಸಾರಂಗಿ:  ಸರ್ಫ಼ರಾಜ಼್ ಖಾನ್ ಬಾನ್ಸುರೀ/ಕೊಳಲು:  ರಘುನಂದನ್ ರಾಮಕೃಷ್ಣ ಸಿತಾರ್:  ಅರ್ಜುನ್ ಆನಂದ್ ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಅಂಬಿಕಾತನಯದತ್ತ ರ " ನೆನಲೆಯುತಿದ್ದೆ " ಎಂಬ ಈ ಕವನ, ಅವರ " ಹೃದಯ ಸಮುದ್ರ " ಸಂಕಲನದಲ್ಲಿದೆ. ಈ ಹಾಡಿನಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ಕೆಲವು ರಾಗಗಳ ಛಾಯೆಯನ್ನು ಕಾಣಬಹುದು. ಷಡ್ಜಶ್ರುತಿಯಲ್ಲಿ ಮಿಶ್ರ  ತಿಲಕ್ ಕಾಮೋದ್ , ಯಮನ್ ಕಲ್ಯಾಣ್ ,  ಪಂಚಮಶ್ರುತಿಯಲ್ಲಿ ಮಿಶ್ರ  ಮಾಂಝ್ ಖಮಾಜ್  ಹಾಗೂ ಮತ್ತೆ ಷಡ್ಜಶ್ರುತಿಯಲ್ಲಿ ಛಾಯಾನಟ್  ರಾಗಗಳಿಗೆ ವಿಭಿನ್ನ ರೀತಿಯ ಲಯಗಾರಿಕೆಯೊಂದಿಗೆ ಸಾರಂಗಿ, ಸಿತಾರ್, ಬಾನ್ಸುರೀ, ವೀಣೆ, ಗಿಟಾರ್‍ಗಳ ಹಿನ್ನೆಲೆಯಿದೆ. ಹೆಚ್ಚಿನ ವಿವರಗಳನ್ನು video ವಿವರಣೆಯಲ್ಲಿರುವ timestamp, chapterಗಳಲ್ಲಿ ನೋಡಬಹುದು. ಇಡೀ ಕವನ ಹೀಗಿದೆ. ನಾನಲೆಯುತಿದ್ದೆ ೧ ನಾನಲೆಯುತಿದ್ದೆನೋ ಬಗೆಯ ಬಾನ ಕೆಂಬೆಳಕು-ನಸುಕಿನಲ್ಲಿ ಕಿರಿಮರೆವು ನೆನೆವು ಅರೆಬೆರೆತು ತೆರೆದ ಹೊಸಬಾಳ ಮ