Posts

Showing posts with the label ಮತ್ತೆ ನೆನಪಾಗುತಿದೆ

ನಿಸ್ವನ - ಮತ್ತೆ ನೆನಪಾಗುತಿದೆ

Image
ನಿಸ್ವನದ ಭಾಗವಾಗಿ... ಕವನ:  ಪಿ ಕೆ ಪರಮೇಶ್ವರ ಭಟ್ ಕವನದ ಕಾಪೀರೈಟ್:  ಮೂಕಾಂಬಿಕಾ ಎಸ್ ಜಿ ರಾಗಸಂಯೋಜನೆ/ಗಾಯನ/ವೀಣೆ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ:  ಹೇಮಂತ್ ಕುಮಾರ್ ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಪಿ ಕೆ ಪರಮೇಶ್ವರ ಭಟ್ಟರ ಈ ಕವನದ ರಾಗಸಂಯೋಜನೆ ಕರ್ನಾಟಕ ಶಾಸ್ತ್ರೀಯ ಸಂಗೀತದ ರಾಗ ನಳಿನಕಾಂತಿ ಯಲ್ಲಿದೆ. ಇಲ್ಲಿ ವೀಣೆ ಹಾಗೂ ಗಿಟಾರ್-ಗಳು ಹದವಾದ ನೆನಪಿನ ಲೋಕದ ಚಿತ್ರ ಬರೆಯುತ್ತವೆ. ಇಡೀ ಕವನ ಹೀಗಿದೆ. ಮತ್ತೆ ನೆನಪಾಗುತಿದೆ ೧ ಕಣ್ಣೀರ ಬಟ್ಟಲಲಿ ಹೊಳೆವ ಮುತ್ತಿನ ಮಾಲೆ, ಬಣ್ಣಗಳ ಮಿಂಚು, ಬೆಳಕು! ಪನ್ನೀರ ಪರಿಮಳದ ಹವಳ ಹಲ್ಲಿನ ಸಾಲು, ಮೊಗದಗಲ ನಗೆಯ ಥಳಕು! ೨ ಬರಡು ಬದುಕಿನ ಬಯಲಲೆತ್ತರದ ನುಡಿಬೆಟ್ಟ, ಬಿತ್ತರದ ಹನಿನೀರ ಕೊಳವು. ಹರಿವ ಕಣ್ಣೋಟದಾ ಸೀಮೆಯಿಲ್ಲದ ತೋಟ ಹತ್ತಿರದ ಸುಮನಸರ ಸುಳಿವು. ೩ ಮತ್ತೆ ನೆನಪಾಗುತಿದೆ, ಮೆತ್ತಗಿನ ಮನದಲ್ಲಿ, ಕೃತ್ತಿಕೆಯ ಮಾಲೆಯಂತೆ. ನಿಂತ ಗಡಿಯಾರದಾ ಹಳೆಯ ಮುಳ್ಳುಗಳಂತೆ ಮಲೆನಾಡ ಮಾವಿನಂತೆ… - ಪಿ ಕೆ ಪರಮೇಶ್ವರ ಭಟ್ ಈ ಹಾಡುಗಳೆಲ್ಲವೂ  Creative Commons Attribution-NonCommercial-NoDerivatives 4.0...